Heavy rainfall in Karnataka – ಮುಂದಿನ ಮೂರು ದಿನ ಈ ಜಿಲ್ಲೆಗಳಲ್ಲಿ ಭಾರಿ ಮಳೆ.! ಇಲ್ಲಿದೆ ಮಾಹಿತಿ
ನಮಸ್ಕಾರ ಗೆಳೆಯರೇ ಭಾರತೀಯ ಹವಮಾನ ಇಲಾಖೆ (IMD) ಇದೀಗ ಹೊಸ ಮಾಹಿತಿ ಹಂಚಿಕೊಂಡಿದೆ ಈ ಮಾಹಿತಿಯ ಪ್ರಕಾರ ಮುಂದಿನ ಮೂರು ದಿನ ಕರಾವಳಿ ಭಾಗದ ಜಿಲ್ಲೆಗಳಿಗೆ ಹಾಗೂ ಹಾಸನ ಮತ್ತು ಕೊಡಗು, ಕೋಲಾರ ಜಿಲ್ಲೆಗಳಿಗೆ ಅತಿ ಹೆಚ್ಚು ಮಳೆ ಆಗಲಿದೆ ಹಾಗೂ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಯಾವ ಜಿಲ್ಲೆಗಳಿಗೆ ಎಷ್ಟು ಮಳೆ ಆಗಲಿದೆ ಹಾಗೂ ಭಾರತೀಯ ಹವಮಾನ ಇಲಾಖೆ ನೀಡಿರುವ ಮುನ್ಸೂಚನೆ ಏನು ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ
ಮುಂದಿನ ಮೂರು ದಿನ ಈ ಜಿಲ್ಲೆಗಳಿಗೆ ಭಾರಿ ಮಳೆ (Heavy rainfall in Karnataka).?
ಹೌದು ಗೆಳೆಯರೇ ಭಾರತೀಯ ಹವಮಾನ ಇಲಾಖೆ ಇದೀಗ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಅತಿ ಹೆಚ್ಚು ಮಳೆ ಆಗಲಿದೆ ಎಂದು ಮಾಹಿತಿ ನೀಡಿದೆ, IMD ನೀಡಿರುವ ಮಾಹಿತಿಯ ಪ್ರಕಾರ ಅಕ್ಟೋಬರ್ 24ರ ವರೆಗೆ ಕರಾವಳಿ ಭಾಗದ ಜಿಲ್ಲೆಗಳಿಗೆ ಅತಿ ಹೆಚ್ಚು ಮಳೆ ಆಗಲಿದೆ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ 23 ಅಕ್ಟೋಬರ್ 2025 ರವರೆಗೆ ಮಳೆಯಾಗಲಿದೆ ನಂತರ ಮಳೆ ಪ್ರಮಾಣ ಸ್ವಲ್ಪ ಕಡಿಮೆಯಾಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ಹಂಚಿಕೊಂಡಿದೆ ಹಾಗೂ ಈ ಜಿಲ್ಲೆಗಳಿಗೆ ಎಲ್ಲೋ ಹಾಗೂ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ

ಹೌದು ಗೆಳೆಯರೇ ಕೋಲಾರ, ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳಿಗೆ ಮುಂದಿನ 3 ಗಂಟೆಯಲ್ಲಿ ಬಾರಿ ಮಳೆ ಅಪ್ಪಳಿಸಲಿದೆ ಹಾಗೂ 23 ಅಕ್ಟೋಬರ್ 2025 ರವರೆಗೆ ಮಳೆ ಮುಂದುವರೆಯಲಿದೆ ಎಂದು ಮಾಹಿತಿ ತಿಳಿಸಲಾಗಿದೆ.
ಯಾವ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ಆಗಲಿದೆ (Heavy rainfall in Karnataka).?
ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿರುವ ಪ್ರಕಾರ ಮುಂದಿನ ಮೂರು ದಿನದವರೆಗೆ ಚಾಮರಾಜನಗರ, ಹಾಸನ, ಕೋಲಾರ, ಕೊಡಗು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ಆಗಲಿದೆ ಹಾಗೂ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ನೀಡಲಾಗಿದೆ.
ಇದರ ಜೊತೆಗೆ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರ ಮತ್ತು ಬೆಂಗಳೂರಿನ ಸುತ್ತಮುತ್ತ ಜಿಲ್ಲೆಗಳಲ್ಲಿ ಹಲವಡೆ ಸಾಧಾರಣ ಮಳೆಯಾಗಬಹುದು ಎಂದು ಇಲಾಖೆ ಮಾಹಿತಿ ತಿಳಿಸಿದೆ.
ಅದೇ ರೀತಿ ನಾಳೆ ಅಂದರೆ ಅಕ್ಟೋಬರ್ 23 2025 ಗುರುವಾರದಂದು ಉಡುಪಿ ಹಾಗೂ ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಅರ್ಭಟ ಜೋರಾಗಿರಲಿದೆ ಮತ್ತು ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ, ಇಷ್ಟೇ ಅಲ್ಲದೆ ಚಿಕ್ಕಮಂಗಳೂರು ಹಾಗೂ ಚಾಮರಾಜನಗರ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದೆ ಹಾಗೂ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ
ಇದರ ಜೊತೆಗೆ ರಾಮನಗರ, ತುಮಕೂರು, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಭಾರಿ ಮಳೆ ಆಗಬಹುದು ಹಾಗೂ ಈ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ ನೀಡಲಾಗಿದೆ
ಅಕ್ಟೋಬರ್ 24ರಂದು ಈ ಜಿಲ್ಲೆಗಳಲ್ಲಿ ಮಳೆ ಹೇಗಿದೆ (Heavy rainfall in Karnataka)..?
ಹೌದು ಸ್ನೇಹಿತರೆ ಅಕ್ಟೋಬರ್ 24ರಂದು ಅಂದರೆ ಶುಕ್ರವಾರ ದಿನ ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಭಾರತೀಯ ಹವಮಾನ ಇಲಾಖೆ ಅರೇಂಜ್ ಅಲರ್ಟ್ ಘೋಷಣೆ ನೀಡಿದೆ ಇದರ ಜೊತೆಗೆ ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಹಾವೇರಿ ಮತ್ತು ಗದಗ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ನೀಡಲಾಗಿದೆ
ಇದರ ಜೊತೆಗೆ ದಕ್ಷಿಣ ಒಳನಾಡಿನ ಕೊಡಗು, ಶಿವಮೊಗ್ಗ, ಚಿಕ್ಕಮಂಗಳೂರು ಮತ್ತು ಹಾಸನ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ನೀಡಲಾಗಿದ್ದು ಈ ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದೆ
ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ಈ ಲೇಖನೆಯನ್ನು ಶೇರ್ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು ನಮ್ಮ ವಾಟ್ಸಾಪ್ ಚಾನೆಲ್ ಹಾಕುವ ಭೇಟಿ ನೀಡಬಹುದು
Karnataka Government: ಅನುಕಂಪದ ಆಧಾರದ ಮೇಲೆ ಉದ್ಯೋಗ ನೀಡುವುದರ ಬಗ್ಗೆ ಗುಡ್ ನ್ಯೂಸ್ ಕೊಟ್ಟ ಸಿದ್ದರಾಮಯ್ಯ









