ಪ್ರಸೂತಿ ಆರೈಕೆ ಯೋಜನೆ: ₹3000 ವರೆಗೆ ಆರ್ಥಿಕ ನೆರವು ಸಿಗುತ್ತೆ .! ಇಲ್ಲಿದೆ ಮಾಹಿತಿ ನೋಡಿ 

ಪ್ರಸೂತಿ ಆರೈಕೆ ಯೋಜನೆ: ₹3000 ವರೆಗೆ ಆರ್ಥಿಕ ನೆರವು ಸಿಗುತ್ತೆ .! ಇಲ್ಲಿದೆ ಮಾಹಿತಿ ನೋಡಿ

ನಮಸ್ಕಾರ ಗೆಳೆಯರೇ ಕರ್ನಾಟಕ ರಾಜ್ಯ ಸರ್ಕಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸೂತಿ ಆರೈಕೆ ಯೋಜನೆ ಜಾರಿಗೆ ತಂದಿದೆ ಈ ಒಂದು ಯೋಜನೆಯ ಮೂಲಕ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಬರೋಬ್ಬರಿ 3000 ವರೆಗೆ ಮಹಿಳೆಯರು ಸಹಾಯ ಧನ ಪಡೆಯಬಹುದು ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಈ ಯೋಜನೆ ಕುರಿತು ಮಾಹಿತಿ ತಿಳಿದುಕೊಳ್ಳೋಣ

ಪ್ರಸೂತಿ ಆರೈಕೆ ಯೋಜನೆ
ಪ್ರಸೂತಿ ಆರೈಕೆ ಯೋಜನೆ

 

ಏನಿದು ಪ್ರಸೂತಿ ಆರೈಕೆ ಯೋಜನೆ.?

ಸ್ನೇಹಿತರೆ ಇದು ಕರ್ನಾಟಕ ರಾಜ್ಯ ಸರ್ಕಾರ 2007 ವರ್ಷದಲ್ಲಿ ಜಾರಿಗೆ ತಂದಿದೆ ಈ ಒಂದು ಯೋಜನೆಯ ಮೂಲಕ ಮಹಿಳೆಯರಿಗೆ ಹೆರಿಗೆಯ ಸಂದರ್ಭದಲ್ಲಿ ಸಾಮಾನ್ಯ ವರ್ಗಕ್ಕೆ ರೂ.2000 ವರೆಗೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗಕ್ಕೆ ಸೇರಿದ ಮಹಿಳೆಯರಿಗೆ 3000 ವರೆಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತರಲಾಗಿದೆ.

ಹೌದು ಗೆಳೆಯರೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಈ ಒಂದು ಯೋಜನೆ ಜಾರಿಗೆ ತಂದಿದ್ದು ಈ ಯೋಜನೆ ಮೂಲಕ ಮಹಿಳೆಯರು ಹೆರಿಗೆಯ ಸಂದರ್ಭದಲ್ಲಿ ಸರ್ಕಾರದಿಂದ 3000 ವರೆಗೆ ಆರ್ಥಿಕ ನೆರವು ಪಡೆಯಬಹುದು

ಹಣ ಪಾವತಿ ಹೇಗೆ ಮಾಡಲಾಗುತ್ತದೆ.?

ಸ್ನೇಹಿತರೆ ಈ ಒಂದು ಯೋಜನೆಯ ಮೂಲಕ ಫಲಾನುಭವಿಗಳಿಗೆ ಎರಡು ಹಂತದಲ್ಲಿ ಆರ್ಥಿಕ ನೆರವು ಒದಗಿಸಲಾಗುತ್ತದೆ.

WhatsApp Group Join Now
Telegram Group Join Now       

ಮೊದಲ ಹಂತದಲ್ಲಿ ಫಲಾನುಭವಿ ಗರ್ಭಧಾರಣೆಯಾದ ಎರಡನೇ ತ್ರೈ ಮಾಸಿಕ ಅವಧಿಯಲ್ಲಿ ಅಂದರೆ 13 ರಿಂದ 28 ವಾರಗಳ ನಡುವೆ ಈ ಒಂದು ಯೋಚನೆಯ ಮೂಲಕ ಮೊದಲನೇ ಕಂತಿನ ಬಿಡುಗಡೆ ಮಾಡಲಾಗುತ್ತದೆ

ಎರಡನೇ ಕಂತು ಸರಕಾರಿ ಆಸ್ಪತ್ರೆಗಳಲ್ಲಿ ಹೆರಿಗೆಯಾದ ನಂತರ ಈ ಒಂದು ಯೋಜನೆಯ ಮೂಲಕ ಮಹಿಳೆಯರಿಗೆ ಹಣ ನೀಡಲಾಗುತ್ತದೆ ಹಾಗಾಗಿ ಹಣ ಎಷ್ಟು ಸಿಗುತ್ತದೆ ಎಂಬ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ

  • ಸಾಮಾನ್ಯ ವರ್ಗಕ್ಕೆ ಸೇರಿದ ಮಹಿಳೆಯರಿಗೆ ರೂ. 2000 ವರೆಗೆ ಈ ಒಂದು ಯೋಜನೆಯ ಮೂಲಕ ಆರ್ಥಿಕ ನೆರವು ಪಡೆಯಬಹುದು
  • ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST) ವರ್ಗದ ಮಹಿಳೆಯರಿಗೆ 3000 ವರೆಗೆ ಈ ಒಂದು ಯೋಜನೆ ಮೂಲಕ ಆರ್ಥಿಕ ನೆರವು ಪಡೆಯಲು ಸಾಧ್ಯವಿದೆ

 

ಈ ಒಂದು ಯೋಜನೆಗೆ ಯಾರು ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತಮಾನದಂಡಗಳು..?

ಸ್ನೇಹಿತರೆ ಈ ಒಂದು ಯೋಜನೆಗೆ ಬಿಪಿಎಲ್ ಕಾರ್ಡ್ ಹೊಂದಿದ ಕುಟುಂಬದ ಮಹಿಳೆಯರು ಅರ್ಜಿ ಸಲ್ಲಿಸಲು ಅವಕಾಶವಿದೆ ಇದರ ಜೊತೆಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರು ಈ ಒಂದು ಯೋಜನೆಯ ಪ್ರಯೋಜನ ಪಡೆಯಬಹುದಾಗಿದೆ ಹಾಗಾಗಿ ಅರ್ಜಿ ಸಲ್ಲಿಸಲು ಕೆಲವೊಂದು ಅರ್ಹತಮಾನದಂಡಗಳು ನೀಡಲಾಗಿದ್ದು ಇದಕ್ಕೆ ಸಂಬಂಧಿಸಿದ ವಿವರಗಳನ್ನು ನಾವು ಕೆಳಗಡೆ ತಿಳಿಸಿದ್ದೇವೆ

  • ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಕಡ್ಡಾಯವಾಗಿ ಕರ್ನಾಟಕದ ಖಾಯಂ ನಿವಾಸಿಗಳಾಗಿರಬೇಕು
  • ಈ ಯೋಜನೆಯ ಲಾಭ ಪಡೆಯಲು ಮಹಿಳೆಯರು ಗರ್ಭವತಿ ಅಥವಾ ಹಾಲುಣಿಸುವ ತಾಯಂದಿರಾಗಿರಬೇಕು
  • ಈ ಒಂದು ಯೋಜನೆ ಅರ್ಜಿ ಸಲ್ಲಿಸಲು ಸಾಮಾನ್ಯ ವರ್ಗ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರು ಅರ್ಜಿ ಸಲ್ಲಿಸಲು ಅವಕಾಶವಿದೆ
  • ಈ ಒಂದು ಯೋಜನೆ ಲಾಭ ಪಡೆಯಬೇಕಾದರೆ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಆಗಬೇಕು
  • ಈ ಯೋಜನೆ ಲಾಭ ಪಡೆಯಲು ಅರ್ಜಿದಾರರು ಕಡ್ಡಾಯವಾಗಿ ಬಿಬಿಎಂ ರೇಷನ್ ಕಾರ್ಡ್ ಹೊಂದಿರಬೇಕು

ಅರ್ಜಿ ಸಲ್ಲಿಸಬೇಕಾಗುವ ಅಗತ್ಯ ದಾಖಲಾತಿಗಳ ವಿವರ.?

  • ಅರ್ಜಿದಾರ ವಾಸ ಸ್ಥಳ ಪ್ರಮಾಣ ಪತ್ರ
  • ಅರ್ಜಿದಾರ ಬಿಪಿಎಲ್ ರೇಷನ್ ಕಾರ್ಡ್ ಪ್ರತಿ
  • ಅರ್ಜಿದಾರ ಆಧಾರ್ ಕಾರ್ಡ್ ನಂಬರ್
  • ಅರ್ಜಿದಾರ ತಾಯಿ ಕಾರ್ಡ್ ಅಥವಾ ANC ನೋಂದಣಿ ನಂಬರ್
  • ಅರ್ಜಿದಾರ ಬ್ಯಾಂಕ್ ಖಾತೆಯ ವಿವರಗಳು
  • ಮೊಬೈಲ್ ನಂಬರ್
  • ಅರ್ಜಿದಾರ ಜಾತಿ ಪ್ರಮಾಣ ಪತ್ರ
  • ಇತರೆ ಅಗತ್ಯ ದಾಖಲಾತಿಗಳು

 

ಯಾವ ರೀತಿ ಅರ್ಜಿ ಸಲ್ಲಿಸಬೇಕು..?

ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ನಿಮ್ಮ ಹತ್ತಿರದ ಸರಕಾರಿ ಆಸ್ಪತ್ರೆ ಅಥವಾ ನಿಮ್ಮ ಗ್ರಾಮದ ಆಶಾ ಕಾರ್ಯಕರ್ತರನ್ನು ಭೇಟಿ ಮಾಡಿ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು ಮತ್ತು ಈ ಯೋಜನೆ ಮೂಲಕ ಲಾಭ ಪಡೆಯಲು ಎಲ್ಲಾ ಅಗತ್ಯ ದಾಖಲಾತಿಗಳು ಮತ್ತು ತಪಾಸಣೆ ಮಾಡಿಸಿ ದಾಖಲಾತಿಗಳನ್ನು ಒದಗಿಸಿ ಹಾಗಾಗಿ ಇನ್ನಷ್ಟು ಹೆಚ್ಚಿನ ಮಾಹಿತಿಗಾಗಿ ನಿಮ್ಮ ಗ್ರಾಮದ ಅಂಗನವಾಡಿ ಆಶಾ ಕಾರ್ಯಕರ್ತರನ್ನು ಭೇಟಿ ಮಾಡಿ

WhatsApp Group Join Now
Telegram Group Join Now       

ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ಈ ಲೇಖನಿಯನ್ನು ಶೇರ್ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು ನಮ್ಮ ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಭೇಟಿ ನೀಡಬಹುದು

Tata Capital Pank Scholarship: ವಿದ್ಯಾರ್ಥಿಗಳಿಗೆ ₹15000 ರಿಂದ ₹1 ಲಕ್ಷದವರೆಗೆ ಸ್ಕಾಲರ್ಶಿಪ್ ಸಿಗುತ್ತೆ.! ಇಂದೇ ಅರ್ಜಿ ಸಲ್ಲಿಸಿ

Leave a Comment